ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ

ಸಾಂಖ್ಯಿಕ ತಜ್ಞರಾದ ಪ್ರೊ|ಪಿ.ಸಿ ಮಹಾಲನೋಬಿಸ್ ಇವರ ಜನ್ಮದಿನವನ್ನು `ರಾಷ್ಟ್ರೀಯ ಸಾಂಖ್ಯಿಕ ದಿನ-2019’ವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ದಕ್ಷಿಣ ಕನ್ನಡ ಮಂಗಳೂರು ಇವರು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದರು.

ಸುಸ್ಥಿರ ಅಭಿವೃದ್ಧಿ ಗುರಿ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ರಿತೇಶ್ ರೈ ಎಂ.ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಮತ್ತು ತೃಪ್ತಿ ವಿ.ಎಸ್.ರವರು ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಕಾಲೇಜ್‍ನ ಪ್ರಾಂಶುಪಾಲ ವಂ|ವಿಜಯ್ ಲೋಬೋ, ಸಂಖ್ಯಾಶಾಸ್ತ್ರ ವಿಭಾಗದ ಉಪನ್ಯಾಸಕ ಭರತ್ ಪೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.