ಪ್ರಬಂಧ ಸ್ಪರ್ಧೆ

 

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ಜಯುಂತಿ ಆಚರಣೆ ಪ್ರಯುಕ್ತ ಪುತ್ತೂರು ತಾಲೂಕಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಪುತ್ತೂರು ಇಲ್ಲಿನ ದ್ವಿತೀಯ ವಿಜ್ಞಾನ ವಿಭಾಗದ ವಿಲಿಯಂ ಸಂತೋಷ್ ಡಿ. ಇವರು ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಮೈಸೂರಿನ ಕೊಳ್ಳೆಗಾಲ ನಿವಾಸಿ ಶ್ರೀ ಡೇವಿಡ್ ಮತ್ತು ಶ್ರೀಮತಿ ರೋಸ್ ಡೇವಿಡ್ ದಂಪತಿಗಳ ಸುಪುತ್ರ.