ಸಾಹಿತ್ಯಿಕ ಸ್ಪರ್ಧೆ

ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಮಂಗಳೂರು ಹಾಗೂ ಜೈನ ಪದವಿ ಪೂರ್ವ ಕಾಲೇಜು, ಮೂಡಬಿದಿರೆ ಇದರ ಸಹಯೋಗದಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯಿಕ/ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ರಸಪ್ರಶ್ನೆ ಪ್ರಥಮ ಪಿಯುಸಿ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಆಕಾಶ್ ಸಿ. ಭಟ್ ಮತ್ತು ಅಂಜನ್ ಕುಮಾರ್ ಪ್ರಥಮ ಸ್ಥಾನವನ್ನು, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶ್ರೀದೇವಿ ತೃತೀಯ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ. ರಸಪ್ರಶ್ನೆ ದ್ವಿತೀಯ ಪಿಯುಸಿ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿಕ್ರಾಂತ್ ಶೆಣೈ ಮತ್ತು ಅಮನ್ ಮಹಮ್ಮದ್ ಪ್ರಥಮ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ.