ವಿಭಾಗ ಮಟ್ಟದ ಸ್ಪರ್ಧೆ

ಕರ್ನಾಟಕ ಸರಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಸಿಕ/ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಥಮ ವಾಣಿಜ್ಯ ವಿಭಾಗದ ಆಕಾಶ್ ಸಿ. ಭಟ್ ಮತ್ತು ಅಂಜನ್ ಕುಮಾರ್ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ವಿಕ್ರಾಂತ್ ಶೆಣೈ ಮತ್ತು ಅಮನ್ ಮಹಮ್ಮದ್ ಇವರು ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ. ಇವರು ಡಿಸೆಂಬರ್ 13ರಂದು SBRR ಮಹಾಜನ ಪದವಿ ಪೂರ್ವ ಕಾಲೇಜು ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.