ಶಾರದಾ ಮಹೋತ್ಸವ

ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 1 ರಂದು ನಡೆದ ‘ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಶಾರದಾ ಮಹೋತ್ಸವ ಸಾಂಸ್ಕೃತಿಕ ಸ್ಪರ್ಧೆಗಳು 2017’ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಜಯಪ್ರಕಾಶ್ ಇವರು ಚಿತ್ರಕಲೆ (ವೈಯಕ್ತಿಕ) ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ದರ್ಬೆ ನಿವಾಸಿ ಶ್ರೀನಿವಾಸ ಮತ್ತು ಮಲ್ಲಕಾ ದಂಪತಿಗಳ ಪುತ್ರ.

ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 1 ರಂದು ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಶಾರದಾ ಮಹೋತ್ಸವ ಸಾಂಸ್ಕ್ರತಿಕ ಸ್ಪರ್ಧೆಗಳು 2017′ ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾದ ವಿದ್ಯಾರ್ಥಿನಿಯಾದ ಅಶ್ವಿತಾ ಸಿ. ಇವರು ಭರತನಾಟ್ಯ (ವೈಯಕ್ತಿಕ) ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಈಕೆ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್‌ರವರ ಶಿಷ್ಯೆಯಾಗಿದ್ದು, ನರಿಮೊಗರು ಶ್ರೀ ಚಂದ್ರಕಾಂತ್ ಮತ್ತು ವಾಣಿ ದಂಪತಿಗಳ ಸುಪುತ್ರಿ.