‘ವಿಕಾಸ – 2018’

ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು ಬಂಟ್ವಾಳ ಇದರ ಆಶ್ರಯದಲ್ಲಿ ನಡೆದ ‘ವಿಕಾಸ – 2018’ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಮೂಲಕ ಛಾಂಪಿಯನ್ ಆಗಿ ಮೂಡಿಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 26 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿರುವ ಈ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಾಲ್ಕು ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಗಮನಾರ್ಹ ಸಾಧನೆಯನ್ನು ದಾಖಲಿಸಿದೆ.

ದ್ವಿತೀಯ ವಾಣಿಜ್ಯ ವಿಭಾಗದ ಶ್ರೀದೇವಿ ಕೆ. ಇವರು ಕನ್ನಡ ಭಾಷಣ ಹಾಗೂ ಆಶು ಭಾಷಣದಲ್ಲಿ ಪ್ರಥಮ ಸ್ಥಾನವನ್ನು , ದ್ವಿತೀಯ ವಾಣಿಜ್ಯ ವಿಭಾಗದ ಲಹರಿ ಎಹ್. ಆಚಾರ್ಯ ಜನಪದ ಗೀತೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಆಕಾಶ್ ಸಿ. ಭಟ್ ಮತ್ತು ಅಂಜನ್ ಕುಮಾರ್ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.